ಕನ್ನಡ ರಾಜಮನೆತನಗಳ ಪ್ರಮುಖ ಅಂಶಗಳು.

ರಾಜಮನೆತನಗಳ ಪ್ರಮುಖ ಅಂಶಗಳು. ೧) ಮೌರ್ಯರು : ━━━━━━━━━ ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ. * ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು. * ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ. * ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು : - ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ.ರಾಮೇಶ್ವರ. - ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ, ಪಾಲ್ಕಿಗುಂಡು, ಕೊಪ್ಪಳ. - ಗುಲ್ಬರ್ಗಾ ಜಿಲ್ಲೆಯ ಸನ್ನತಿ. - ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದೇಗೊಳ್ಳಂ ೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225) : ━━━━━━━━━━━━━━━━━━━━━━━━━━━━━━ ━━━━━━━━━━━ ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು. * ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ. * ಇವರ ಲಾಂಛನ : ವರುಣ. * ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು. * ಶಾತವಾಹನರ ಮೂಲ ಪುರುಷ : ಸಿಮುಖ. * ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ * ಶಾತವಾಹನರನ್ನು ' ಶಾತಕರ್ಣಿಗಳೆಂದು' ಕರೆಯುತ್ತಾರೆ. ೩) ಬನವಾಸಿಯ ಕದಂಬರು (ಕ್ರಿ.ಶ 345 - 540) ━━━━━━━━━━━━━━━━━━━━━━━━━━━━━━ ━━━━━━━━━━━ * ಈ ಸಂತತಿಯ ಸ್ಥಾಪಕ :ಮಯೂರವರ್ಮ (ಮಯೂರಶರ್ಮ) (345-360) * ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ) * ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು. * ಇವರ ಲಾಂಛನ : ಸಿಂಹ. ೪) ತಲಕಾಡಿನ ಗಂಗರು (ಕ್ರಿ.ಶ 350- 999) ━━━━━━━━━━━━━━━━━━━━━━━━━━━━━━ ━━━━━━━━━━━ * ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು. * ಈ ಸಂತತಿಯ ಮೊದಲ ದೊರೆ : ದಡಿಗ (350 -400) * ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ * ಇವರ ಎರಡನೆಯ ರಾಜಧಾನಿ : ತಲಕಾಡು * ತಲಕಾಡಿನ ಮತ್ತೊಂದು ಹೆಸರು : ತಲವನಪುರ. * ಇವರ ಮೂರನೇ ರಾಜಧಾನಿ : ಚೆನ್ನಪಟ್ಟಣ ಬಳಿಯ ಮಾಕುಂದ * ಇವರ ಲಾಂಛನ : ಆನೆ(ಮದಗಜ) * ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ದುರ್ವಿನೀತ (540-600) * ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು. * ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು. ೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757) : ━━━━━━━━━━━━━━━━━━━━━━━━━━━━━━ ━━━━━━━━━━━ * ಈ ಸಂತತಿಯ ಸ್ಥಾಪಕ : ಜಯಸಿಂಹ * ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ) * ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ಇಮ್ಮಡಿ ಪುಲಕೇಶಿ (609-642) * ಇವರ ರಾಜ ಲಾಂಛನ : ವರಹ. * ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್. ೬) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540) : ━━━━━━━━━━━━━━━━━━━━━━━━━━━━━━ ━━━━━━━━━━━ * ಈ ಸಂತತಿಯ ಸ್ಥಾಪಕ : ದಂತಿದುರ್ಗ * ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು. * ಇವರ ಲಾಂಛನ : ಗರುಡ * ಈ ಸಂತತಿಯ ಅತ್ಯಂತ ಹೆಸರಾಂತ ದೊರೆ :ಅಮೋಘವರ್ಷ ನೃಪತುಂಗ (814-878) * ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು. ೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200) ━━━━━━━━━━━━━━━━━━━━━━━━━━━━━━ ━━━━━━━━━━━ * ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ * ಇವರ ರಾಜಧಾನಿ : ಕಲ್ಯಾಣ * ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126) * 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು. ೮) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183) ━━━━━━━━━━━━━━━━━━━━━━━━━━━━━━ ━━━━━━━━━━━ * ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು. * ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು. ೯) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346) : ━━━━━━━━━━━━━━━━━━━━━━━━━━━━━━ ━━━━━━━━━━━ * ಈ ಸಂತತಿಯ ಮೂಲ ಪುರುಷ : ಸಳ. * ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು. * ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152) * ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವ

Comments

Popular posts from this blog

ಕರ್ನಾಟಕದ ಪ್ರಥಮಗಳು

KPSC KAS FDA SDA

Geography (ಭೂಗೋಳಶಾಸ್ತ್ರ)